ಶ್ಲೋಕ – 12
ಯುಕ್ತಃ ಕರ್ಮಫಲಂ ತ್ಯಕ್ತ್ವಾ ಶಾಂತಿಮಾಪ್ನೋತಿ ನೈಷ್ಠಿಕೀಮ್ ।
ಅಯುಕ್ತಃ ಕಾಮಕಾರೇಣ ಫಲೇ ಸಕ್ತೋ ನಿಬದ್ಧ್ಯತೆ ॥೧೨॥
ಅಯುಕ್ತಃ ಕಾಮಕಾರೇಣ ಫಲೇ ಸಕ್ತೋ ನಿಬದ್ಧ್ಯತೆ ॥೧೨॥
ಯೋಗ ಬಲ್ಲವನು ಕರ್ಮಫಲದ ನಂಟು
ತೊರೆದು ನಿಚ್ಚಳವಾದ ನೆಮ್ಮದಿಯನ್ನು ಪಡೆಯುತ್ತಾನೆ. ಯೋಗಿಯಲ್ಲದವನು ಫಲದಲ್ಲೆ ಕಣ್ಣಿರಿಸಿ ಆಸೆಪಟ್ಟು ಮಾಡುತ್ತಾ ಅದರ ಬಂದಿಯಾಗುತ್ತಾನೆ.ಕರ್ಮಯೋಗಕ್ಕೆ ತನ್ನನ್ನು ತೊಡಗಿಸಿಕೊಂಡವ, ಭಗವದ್ಪ್ರಜ್ಞೆಯಲ್ಲಿ ಕರ್ಮ ಮಾಡತಕ್ಕವ-ಜ್ಞಾನಾನಂದದ ಅಂತವಾದ ಮೋಕ್ಷವನ್ನು ಪಡೆಯುತ್ತಾನೆ. ನಾವು ಯಾವುದೊ ಒಂದು ಫಲ ಕಾಮನೆಯಿಂದ ಕರ್ಮ ಮಾಡಿದರೆ ಅದರಿಂದ ಯಾವುದೇ ಫಲ ಸಿಗುವುದಿಲ್ಲ ಎಂದಲ್ಲ, ಆದರೆ ಆ ಫಲ ನಮಗೆ ಎಷ್ಟು ಉಪಯುಕ್ತ ಎನ್ನುವ ಅರಿವು ನಮಗೆ ಇರುವುದಿಲ್ಲ ಹಾಗು ಅದು ಪೂರ್ಣವಾದ ಫಲವಾಗಿರುವುದಿಲ್ಲ.
ಫಲಕಾಮನೆ ಇಲ್ಲದೆ ಕರ್ಮ ಮಾಡಿದರೆ ನಾವು ನಮಗೆ ಅಗತ್ಯವಾದ
ಎಲ್ಲವನ್ನು ಪಡೆಯುತ್ತೇವೆ. ನಾವು ಕರ್ಮ ಫಲದ ಆಸೆ ಇಲ್ಲದೆ ಕರ್ಮದಲ್ಲಿ ತೊಡಗಿಸಿಕೊಂಡರೆ, ಕರ್ಮದಲ್ಲೇ ಮುಂದುವರಿದು ಅದರಿಂದ ಜ್ಞಾನಪಡೆದು, ಅಂತಃಕರಣ ಶುದ್ಧಿಯಿಂದ ಭಗವಂತನ ಅನುಗ್ರಹಕ್ಕೆ ಪಾತ್ರರಾಗಿ ಮೋಕ್ಷವನ್ನು ಪಡೆಯುಬಹುದು.ಕರ್ಮಯೋಗವಿಲ್ಲದೆ ‘ನನಗೋಸ್ಕರ ನಾನು ದುಡಿಯುತ್ತಿದ್ದೇನೆ.
ಇದು ನನ್ನ ಸಂಪತ್ತು, ನಾನು ದುಡಿದಿದ್ದನ್ನು ನನ್ನ ಸುಖಕ್ಕಾಗಿ ಖರ್ಚು ಮಾಡುತ್ತೇನೆ, ಯಾವ ದೇವರೂ ನಮಗೆ ಸಹಾಯ ಮಾಡುವುದಿಲ್ಲ‘ ಇತ್ಯಾದಿ ಆತ್ಮ ಕೇಂದ್ರಿತವಾದ ಭಾವನೆಯಿಂದ ಕರ್ಮ ಮಾಡಿದಾಗ ಕರ್ಮ ನಮಗೆ ಬಂದಿಯಾಗುತ್ತದೆ. ಒಂದು ಮೂಕಪ್ರಾಣಿ ಕೂಡಾ ಹೀಗೆ ಬದುಕುವುದಿಲ್ಲ.
ಉದಾಹರಣೆಗೆ ಕಾಗೆ ಒಂದು ತಿನ್ನುವ ವಸ್ತು ಕಾಣಿಸಿದರೆ, ತನ್ನೆಲ್ಲಾ ಬಳಗವನ್ನು ಕರೆದು ಹಂಚಿಕೊಂಡು ತಿನ್ನುತ್ತದೆ. ಹುಲಿ-ಸಿಂಹಗಳಂತಹ ಕ್ರೂರ ಮೃಗಗಳೂ ಕೂಡಾ ಒಮ್ಮೆ ತಮ್ಮ ಹೊಟ್ಟೆ ತುಂಬಿದ ಮೇಲೆ ಎಂದೂ ಸ್ವಾರ್ಥದಿಂದ ಕಾರ್ಯ ನಿರ್ವಹಿಸುವುದಿಲ್ಲ. ಆದರೆ ಮಾನವರಾದ ನಾವು ಸ್ವಾರ್ಥದಿಂದ ಬದುಕುತ್ತೇವೆ, ನಮಗೆ ಎಷ್ಟು ಪಡೆದರೂ ಮತ್ತಷ್ಟರಾಸೆ
ಈ ರೀತಿ ಬದುಕುವವನು ಸಂಸಾರ ಚಕ್ರದಲ್ಲಿ ಸಿಕ್ಕಿ ಅದೋಗತಿಯನ್ನು ಪಡೆಯುತ್ತಾನೆ.
ಈ ರೀತಿ ಬದುಕುವವನು ಸಂಸಾರ ಚಕ್ರದಲ್ಲಿ ಸಿಕ್ಕಿ ಅದೋಗತಿಯನ್ನು ಪಡೆಯುತ್ತಾನೆ.

[…] ಭಗವದ್ಗೀತೆ ಗೀತಾಸಾರ-ಅಧ್ಯಾಯ-5-ಶ್ಲೋಕ-12 […]