File written by Adobe Photoshop¨ 5.0
ಶ್ಲೋಕ – 41
ಯದ್ಯದ್ ವಿಭೂತಿಮತ್ ಸತ್ತ್ವಂ ಶ್ರೀಮದೂರ್ಜಿತಮೇವ ವಾ ।
ತತ್ತದೇವಾವಗಚ್ಛ ತ್ವಂ ಮಮ ತೇಜೋಂSಶಸಂಭವಮ್ ॥೪೧॥
ಯತ್ ಯತ್ ವಿಭೂತಿ ಮತ್ ಸತ್ತ್ವಮ್ ಶ್ರೀಮತ್ ಊರ್ಜಿತಮ್ ಏವ ವಾ ।
ತತ್ ತತ್ ಏವ ಅವಗಚ್ಛ ತ್ವಮ್ ಮಮ ತೇಜಃ ಅಂಶ ಸಂಭವಮ್—ಗುಂಪಿನಲ್ಲಿ ಮಿಗಿಲಾದದ್ದು , ಸಿರಿಯಲ್ಲಿ ಹಿರಿದಾದದ್ದು. ಎತ್ತರದಲ್ಲಿ ಮೆರೆದದ್ದು ಯಾವುದೆಲ್ಲ ಇದೆ ಅದೆಲ್ಲವೂ ನನ್ನ ಹಿರಿಮೆಯ ಬೆಳಕಿನ ಕಿಡಿಯಿಂದ ಮೂಡಿಬಂದದ್ದು ಎಂದು ತಿಳಿ.
ಒಟ್ಟಿನಲ್ಲಿ ಒಬ್ಬ ವ್ಯಕ್ತಿಯಲ್ಲಿ, ಒಂದು ವಸ್ತುವಿನಲ್ಲಿ ಇನ್ನೊಬ್ಬರಲ್ಲಿಲ್ಲದ ಯಾವ ವಿಶಿಷ್ಠ ಗುಣವಿದೆ ಅದು ಭಗವಂತನ ಹಿರಿಮೆಯ ಒಂದು ಬೆಳಕಿನ ಕಿಡಿ. ಇದು ಭಗವಂತನ ಅನಂತ ತೇಜಸ್ಸಿನ ಒಂದು ತುಣುಕು.
