Bhagavad Gita
ಅಧ್ಯಾಯ-1
ಶ್ಲೋಕ – 30
ನಚ ಶಕ್ನೋಮ್ಯವಸ್ಥಾತುಂ ಭ್ರಮತೀವ ಚ ಮೇ ಮನಃ ॥೩೦॥
ಗಾಂಡೀವಮ್ ಸ್ರಂಸತೇ ಹಸ್ತಾತ್ ತ್ವಕ್ ಚೈವ ಪರಿದಹ್ಯತೇ ನಚ ಶಕ್ನೋಮಿ ಅವಸ್ಥಾತುಂ ಭ್ರಮತೀವ ಚ ಮೇ ಮನಃ
ಗಾಂಡೀವ ಕೈಯಿಂದ ಜಾರುತ್ತಿದೆ, ತೊಗಲು ಉರಿಯೆದ್ದಿದೆ. ನಿಂತಲ್ಲಿ ನಿಲ್ಲಲಾಗುತ್ತಿಲ್ಲ. ನನ್ನ ಮನಸ್ಸು ಗೊಂದಲಮಯವಾಗುತ್ತಿದೆ.
ಒಬ್ಬ ವ್ಯಕ್ತಿ ತನ್ನ ಆತ್ಮ ವಿಶ್ವಾಸವನ್ನು ಕಳೆದುಕೊಂಡಾಗ, ಆತನ ಅಂತರಂಗದ ಅನುಭವ ದೈಹಿಕವಾಗಿ ಹೇಗೆ ಹೊರಹೊಮ್ಮುತ್ತದೆ ಎನ್ನುವುದನ್ನು ಇಲ್ಲಿ ಕಾಣಬಹುದು.ಆತ್ಮವಿಶ್ವಾಸವಿರದ ವ್ಯಕ್ತಿ ತನ್ನ ಮುಷ್ಠಿ ಬಿಗಿ ಹಿಡಿಯಲಾರ. ಇಲ್ಲಿ ಅರ್ಜುನನ ಸ್ಥಿತಿ ಕೂಡಾ ಹಾಗೇ ಆಗಿದೆ. ಆತ ಹೇಳುತ್ತಾನೆ: “ಗಾಂಡೀವ ನನ್ನ ಕೈಯಿಂದ ಜಾರುತ್ತಿದೆ, ಇಡೀ ಮೈ ಉರಿ ಎದ್ದ ಹಾಗೆ ಸಂಕಟವಾಗುತ್ತಿದೆ” ಎಂದು. ಇದು ಒಳಗಿನ ಭಾವದ, ತುಮುಲದ ಅಭಿವ್ಯಕ್ತ. ಒಮ್ಮೆ ಮನಸ್ಸು ಸ್ಥಿರವಿಲ್ಲದಿದ್ದರೆ ದೇಹಕೂಡಾ ಸ್ಥಿರವಿರಲಾರದು. ಅದೇ ರೀತಿ ದೇಹ ಸ್ಥಿರವಿಲ್ಲದಿದ್ದರೆ ಮನಸ್ಸನ್ನು ಸ್ಥಿರಗೊಳಿಸುವುದು ಸಾದ್ಯವಿಲ್ಲ. “ಈ ರಥದಲ್ಲಿ ಕುಳಿತುಕೊಳ್ಳಲು ಆಗುತ್ತಿಲ್ಲ. ಮನಸ್ಸು ಗೊಂದಲಮಯವಾಗಿದೆ” ಎಂದು ಕೃಷ್ಣನಲ್ಲಿ ಅರ್ಜುನ ಪರಿತಪಿಸುತ್ತಾನೆ.

[…] https://vicharavisthara.com/bhagavad-gita-shloka-30/ […]