ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಹಿಂದಿ ಭಾಷಿಕ ಮತ್ತು ಕನ್ನಡಿಗ ಆಟೋ ಚಾಲಕನ ವಾಕ್ಸಮರಕ್ಕೆ ಸಂಬಂಧಿಸಿದಂತೆ ಕೊನೆಗೂ ಹಿಂದಿಭಾಷಿಕ ಕನ್ನಡದಲ್ಲೇ ಕ್ಷಮೆ ಯಾಚಿಸಿದ್ದಾನೆ.
ಬೆಂಗಳೂರಿನ ಎಸ್ಎಂಎಸ್ ಆರ್ಕೇಡ್ ರಸ್ತೆಯಲ್ಲಿ ಕನ್ನಡಿಗ ಆಟೋ ಚಾಲಕನಿಗೆ ಧಮ್ಕಿ ಹಾಕಿದ್ದ ಹಿಂದಿ ಭಾಷಿಕ ಇದೀಗ ಕನ್ನಡಿಗರ ಕ್ಷಮೆ ಕೋರಿದ್ದಾನೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಹಿಂದಿ ಭಾಷಿಕ ಕನ್ನಡದಲ್ಲೇ ಮಾತನಾಡಿ ಕ್ಷಮೆ ಯಾಚಿಸಿದ್ದು, ನಾನು ಬಳಸಿದ ಪದಗಳಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದು ಹೇಳಿದ್ದಾನೆ.
