Oplus_16908288
ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಸವಾಲ್ ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಯುಟಿ ಖಾದರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿ, ನನ್ನ ರಾಜೀನಾಮೆ ಪತ್ರವನ್ನು ಅಂಗೀಕರಿಸಿ ಎಂದು ಮನವಿ ಮಾಡಿದ್ದಾರೆ.
ಈ ಮೂಲಕ ಬಸವನಗೌಡ ಪಾಟೀಲ್ ಯತ್ನಾಳ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ರಾಜೀನಾಮೆ ಪತ್ರದಲ್ಲಿ ಏನಿದೆ?
ವಿಜಯಪುರ ನಗರ ಶಾಸಕರಾದ ಶ್ರೀ ಬಸನಗೌಡ ಆರ್. ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ. ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಆದುದರಿಂದ. ಶ್ರೀ ಬಸನಗೌಡ ಆರ್. ಪಾಟೀಲ್ (ಯತ್ನಾಳ್) ರವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ. ಎಂದಿದ್ದಾರೆ.
ಸಚಿವ ಶಿವಾನಂದ ಪಾಟೀಲ ಅವರಪ್ಪನಿಗೆ ಹುಟ್ಟಿದ್ದರೆ ನನ್ನ ವಿರುದ್ಧ ಸ್ಪರ್ಧೆ ಮಾಡಲಿ. ಅವರ ಮನೆತನದ ಹೆಸರು ಪಾಟೀಲ ಅಲ್ಲ ಹಚಡದ ಅಂತ ಇತ್ತು. ನಿಮ್ಮಪ್ಪ ನೀವು ಕೂಡಿ ನಿಮ್ಮ ಅಡ್ಡ ಹೆಸರು (ಮನೆ ಹೆಸರು) ಬದಲಾಯಿಸಿಕೊಂಡವರು. ರಾಜಕಾರಣಕ್ಕಾಗಿ ಪಾಟೀಲ ಎಂದು ಮಾಡಿಕೊಂಡಿದ್ದಾರೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದರು. ನಗರ ಕ್ಷೇತ್ರದಿಂದ ಯತ್ನಾಳ ವಿರುದ್ಧ ಚುನಾವಣೆ ಸ್ಪರ್ಧೆ ಮಾಡುವ ಆಸೆ ಇದೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಚಾಲೆಂಜ್ ಮಾಡಿದ್ದರು.

[…] ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ ರಾಜೀನಾಮ… […]