ಮೈಸೂರು : ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ ಎನ್ ರಾಜಣ್ಣ ಗುಡ್ ಹೇಳಿದ್ದಾರೆ
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನನಗೆ ವಯಸ್ಸಾಯ್ತು, ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳುತ್ತೇನೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಆದರೆ ರಾಜಕಾರಣದಲ್ಲಿ ಸಕ್ರಿಯವಾಗಿ ಭಾಗಿಯಾಗುತ್ತೇನೆ ಎಂದರು.
ಮುಂದಿನ ಚುನಾವಣೆಗೆ ನನಗೆ 78 ವರ್ಷ ಆಗುತ್ತದೆ, ಗೆದ್ದರೂ ಆರೋಗ್ಯ ದೃಷ್ಟಿಯಿಂದ ಸೇವೆ ಮಾಡುವುದಕ್ಕೆ ಆಗಲ್ಲ. ಆದರೆ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಸಚಿವರು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಂಗಳವಾರ ಮಾತನಾಡಿದ ಅವರು, ನನಗೆ ಈಗಾಗಲೇ 75 ವರ್ಷವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಆಲೋಚನೆಯಿಲ್ಲ. ಯುವಕರಿಗೆ ಅವಕಾಶ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಈ ತೀರ್ಮಾನ ಕೈಗೊಂಡಿದ್ದೇನೆ. ಆದರೆ, ಸಹಕಾರಿ ಕ್ಷೇತ್ರ ಹಾಗೂ ಸಕ್ರೀಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದರು. ‘ಚುನಾವಣೆಗೆ ನಿಲ್ಲದೆ ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತೇನೆ. ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಮುಂದುವರೆಯುವೆ ಎಂದು ಹೇಳಿದರು
ಸಹಕಾರ ಕ್ಷೇತ್ರಕ್ಕೆ ಹೊಸ ಚಟುವಟಿಕೆಗಳು:
ಹುಣಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ರಾಜಣ್ಣ ಅವರು ಸಹಕಾರ ಕ್ಷೇತ್ರದ ಸ್ಥಿತಿಗತಿಗಳನ್ನು ವಿವರಿಸಿದರು. ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರವನ್ನು ಮುಕ್ತಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸಹಕಾರ ಕ್ಷೇತ್ರದ ಕಾಯ್ದೆಯಲ್ಲಿ ತಿದ್ದುಪಡಿ ತರಲು ರಾಜ್ಯಪಾಲರ ಅಂಕಿತದ ನಂತರ ಕೇಂದ್ರಕ್ಕೆ ಕಳುಹಿಸುವ ಅಗತ್ಯವಿಲ್ಲ. ಈ ತಿದ್ದುಪಡಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕಾದ ಅಗತ್ಯವಿಲ್ಲ. ಈ ಕುರಿತು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಡೇರಿ ಚುನಾವಣೆಗಳು ಮುಂದೂಡಿಕೆಗೆ ತಾಂತ್ರಿಕ ಕಾರಣ:
ಎಂಡಿಸಿಸಿ ಸೇರಿದಂತೆ ಕೆಲವು ಡೇರಿ ಚುನಾವಣೆಗಳನ್ನು ಮತಪಟ್ಟಿ ಹಾಗೂ ತಾಂತ್ರಿಕ ಕಾರಣಗಳಿಂದಾಗಿ ಮುಂದೂಡಲಾಗಿದೆ. ಅಲ್ಲದೆ ಮತಪಟ್ಟಿ ಸೇರಿದಂತೆ ಕೆಲ ತಾಂತ್ರಿಕ ಕಾರಣದಿಂದಾಗಿ ಚುನಾವಣೆ ಮುಂದೂಡಲಾಗಿದೆ. ಈ ಬಗ್ಗೆ ಯಾವುದೇ ರಾಜಕೀಯ ಕಾರಣವಿಲ್ಲ. ಸಹಕಾರಿ ಸಂಸ್ಥೆಗಳಲ್ಲಿ ವಹಿವಾಟು, ಮಹಾಸಭೆ ಸೇರಿದಂತೆ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೇ ವಿನಃ, ಚುನಾವಣೆಯಲ್ಲಿ ಮತ ಹಾಕಲು ಸಹಕಾರ ಸಂಸ್ಥೆ ಸದಸ್ಯತ್ವ ಪಡೆಯುವುದಲ್ಲ. ಇದರಿಂದ ಆ ಸಂಘಗಳಿಗೆ ಹೊರೆಯಾಗಲಿದೆ. ಎಲ್ಲ ಸದಸ್ಯರು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೆಂಬುದು ಸರಕಾರದ ಉದ್ದೇಶ. ಮುಂದಿನ ದಿನಗಳಲ್ಲಿ ಎಲ್ಲಾ ಚುನಾವಣೆಗಳನ್ನು ಕಾಲಮಿತಿಯಲ್ಲಿ ನಡೆಸಲಾಗುವುದು ಎಂದು ಸಚಿವ ರಾಜಣ್ಣ ತಿಳಿಸಿದ್ದಾರೆ
ಜನ್ಮದಿನಾಚರಣೆ ಮುಂದೂಡಿಕೆ:
ಸಹಕಾರ ಸಚಿವ ಕೆ.ಎನ್.ರಾಜಣ್ಣರ 75ನೇ ಹುಟ್ಟುಹಬ್ಬದ ನಿಮಿತ್ತ ಮೇ.13 ರಂದು ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಬೃಹತ್ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿತ್ತು. ಈ ವೇಳೆ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಲೋಕಾರ್ಪಣೆಯನ್ನೂ ಮಾಡಲು ಮುಂದಾಗಿತ್ತು. ಕೆ.ಎನ್ರಾಜಣ್ಣರ ಹಿತೈಷಿಗಳು ಬೃಹತ್ ಕಾರ್ಯಕ್ರಮ ಆಯೋಜಿಸಿದ್ದರು. ಒಂದು ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದರು. ಆದರೆ, ಆಪರೇಷನ್ ಸಿಂದೂರ್ ಯುದ್ಧ ಸಂಘರ್ಷದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಲಾಗಿದೆ. 2 ತಿಂಗಳಿನಿಂದ ಈ ಕಾರ್ಯಕ್ರಮಕ್ಕೆ ಸಾಕಷ್ಟು ಶ್ರಮ ವಹಿಸಿದ್ದರು. ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಬೇಕಿತ್ತು. ಇದೀಗ ಕಾರ್ಯಕ್ರಮ ಮುಂದೂಡಿಕೆ ಬೇಜಾರಿಲ್ಲಾ, ನಮಗೆ ದೇಶ ಮೊದಲು ಎಂದು ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ತಿಳಿಸಿದ್ದರು.
