ಶ್ಲೋಕ – 21
ಅಮೀ ಹಿ ತ್ವಾಂ ಸುರಸಂಘಾ ವಿಶಂತಿ ಕೇಚಿದ್ ಭೀತಾಃ ಪ್ರಾಂಜಲಯೋ ಗೃಣಂತಿ ।
ಸ್ವಸ್ತೀತ್ಯುಕ್ತ್ವಾ ಮಹರ್ಷಿಸಿದ್ಧಸಂಘಾಃ ಸ್ತುವಂತಿ ತ್ವಾಂ ಸ್ತುತಿಭಿಃ ಪುಷ್ಕಳಾಭಿಃ ॥೨೧॥
ಅಮೀ ಹಿ ತ್ವಾಮ್ ಸುರಸಂಘಾ ವಿಶಂತಿ ಕೇಚಿತ್ ಭೀತಾಃ ಪ್ರಾಂಜಲಯೋ ಗೃಣಂತಿ ।
ಸ್ವಸ್ತಿ ಇತಿ ಉಕ್ತ್ವಾ ಮಹರ್ಷಿ ಸಿದ್ಧಸಂಘಾಃ ಸ್ತುವಂತಿ ತ್ವಾಮ್ ಸ್ತುತಿಭಿಃ ಪುಷ್ಕಳಾಭಿಃ –ನಿನ್ನೊಳಹೋಗುತ್ತಿದ್ದಾರೆ ಈ ದೇವತೆಗಳು ಗುಂಪುಗೂಡಿ. ಬೆಚ್ಚಿ ಕೈಮುಗಿದು ಬೇಡುತ್ತಿದ್ದಾರೆ. ಮತ್ತೆ ಕೆಲವರು ‘ಒಳಿತಾಗಲಿ’ ಎಂದು ಹಾರೈಸುತ್ತಾ ಹತ್ತು ಹಲವು ಹಾಡುಗಬ್ಬಗಳಿಂದ ನಿನ್ನನ್ನು ಹೊಗಳುತ್ತಿದ್ದಾರೆ ಹಿರಿಯ ಋಷಿಗಳು, ಗುಂಪು ಗುಂಪಾಗಿ.
ಕೆಲವರು ನಿನ್ನೊಳಗೆ ಹೋಗುತ್ತಿದ್ದಾರೆ, ಇನ್ನು ಕೆಲವರು ಹೊರಬರುತ್ತಿದ್ದಾರೆ. ಕೆಲವರು ಕೈಮುಗಿದು ನಿನ್ನ ಸ್ತೋತ್ರ ಮಾಡುತ್ತಿದ್ದಾರೆ. ಜ್ಞಾನಿಗಳು ನಿನ್ನ ಈ ಅದ್ಭುತ ರೂಪವನ್ನು ಕಂಡು ‘ಜಗತ್ತಿಗೆ ಮಂಗಳವಾಗಲಿ’ ಎಂದು ಹರಸುತ್ತಿದ್ದಾರೆ. ಋಷಿ ಮುನಿಗಳು ನಾನಾ ಸ್ತೋತ್ರಗಳಿಂದ ನಿನ್ನನ್ನು ಸ್ತುತಿಸುತ್ತಿದ್ದಾರೆ.
