ಶ್ಲೋಕ – 38
ಕಚ್ಚಿನ್ನೋಭಯವಿಭ್ರಷ್ಟಶ್ಛಿನ್ನಾಭ್ರಮಿವ ನಶ್ಯತಿ ।
ಅಪ್ರತಿಷ್ಠೋ ಮಹಾಬಾಹೋ ವಿಮೂಢೋ ಬ್ರಹ್ಮಣಃ ಪಥಿ ||
ಓ ಮಹಾವೀರ, ನೆಲೆಗಾಣದೆ, ಭಗವಂತನ ದಾರಿಯಲ್ಲಿ ಗುರಿತಪ್ಪಿದ ಅವನು ಇಲ್ಲೂ ಇಲ್ಲದೆ ಅಲ್ಲೂ ಸಲ್ಲದೆ ತುಂಡು ಮೋಡದಂತೆ ಮರೆಯಾಗುವನೆ?
ಇಂತವರು ಇಹವೂ ಇಲ್ಲದೆ, ಪರವೂ ಇಲ್ಲದೆ, ಒಂದು ತುಣುಕು ಮೋಡದಂತೆ ಆ ಕಡೆ ನೆರಳೂ ಆಗದೆ, ಈಚೆ ಮಳೆಯೂ ಸುರಿಸದೆ ಯಾವುದಕ್ಕೂ ಉಪಯೋಗವಿಲ್ಲದೆ ವ್ಯರ್ಥವಾಗಿ ಹೋಗುವುದೋ ಅವರ ಬದುಕು? ಜ್ಞಾನ ಬಲ ಇಚ್ಛಾ ಸ್ವರೂಪನಾದ(ಮಹಾಬಾಹೋಃ) ನೀನು ಅಂತಹ ವಯವಿಭ್ರಷ್ಟರನ್ನು ಏನು ಮಾಡುತ್ತೀಯ?

[…] ಭಗವದ್ಗೀತೆ ಅಧ್ಯಾಯ -6 ಶ್ಲೋಕ- 38 […]