ಅಧ್ಯಾಯ-1
ಶ್ಲೋಕ – 22
ಯಾವದೇತಾನ್ ನಿರೀಕ್ಷೇsಹಂ ಯೋದ್ಧುಕಾಮಾನವಸ್ಥಿತಾನ್ ।
ಕೈರ್ಮಯಾ ಸಹ ಯೋದ್ಧವ್ಯಮಸ್ಮಿನ್ ರಣಸಮುದ್ಯಮೇ ॥೨೨॥
ಕಾದ ಬಯಸಿ ನೆರೆದ ಇವರತ್ತ ನಾನೊಮ್ಮೆ ಕಣ್ಣು ಹಾಯಿಸುತ್ತೇನೆ. ಈ ಕದನದ ಕಾಯಕದಲ್ಲಿ ಯಾರು ನನ್ನ ಜೊತೆ ಹಾಗು ಯಾರ ಜೊತೆ ನಾನು ಕಾದಬೇಕು ಎಂದು?
ಮಹಾಭಾರತ ಯುದ್ಧ ಇತಿಹಾಸದಲ್ಲಿ ದಾಖಲೆಯಾದ ಮೊದಲ ಜಾಗತಿಕ ಯುದ್ಧ. ಇಂತಹ ಯುದ್ಧದ ಮಂಚೂಣಿಯಲ್ಲಿ ನಿಂತ ಅರ್ಜುನ ಅಹಂಕಾರದಿಂದ ಮಾತನಾಡುತ್ತಿದ್ದಾನೆ. ಆತ ಶ್ರೀಕೃಷ್ಣನಲ್ಲಿ “ಇಲ್ಲಿ ನೆರೆದ ಇವರತ್ತ ನಾನೊಮ್ಮೆ ಕಣ್ಣು ಹಾಯಿಸಬೇಕು. ನನ್ನ ವಿರುದ್ಧ ಯುದ್ಧ ಮಾಡಲು ಬಂದವರು ಯಾರು, ಹಾಗು ನನ್ನ ಕಡೆಯಿಂದ ನನ್ನ ಸಹ ಯುದ್ಧ ಮಾಡಲು ಬಂದವರು ಯಾರು ಎಂದು ನಾನೊಮ್ಮೆ ನೋಡಬೇಕು” ಎನ್ನುತ್ತಾನೆ. ಇಲ್ಲಿ “ನನ್ನೊಂದಿಗೆ ಯುದ್ಧ ಮಾಡಲು ಬಂದವರನ್ನೊಮ್ಮೆ ನೋಡಬೇಕು” ಎನ್ನುವಲ್ಲಿ ಅಹಂಕಾರಭರಿತ ವ್ಯಂಗ್ಯವಿದೆ. ತಾನು ಮಹಾವೀರ, ನನ್ನೆದುರು ನೆರೆದ ಈ ಸೇನೆ ನನಗೆ ಏನೂ ಅಲ್ಲ ಎನ್ನುವ ಸೊಕ್ಕಿನ ಮಾತಿದು.

[…] […]