ಹಾಸನ: ಹಳೇ ವಿದ್ಯುತ್ ಕಂಬ ಬದಲಿಸುವಾಗ ಭಾರೀ ಅವಘಡ – ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವು, ಮತ್ತೊಬ್ಬರಿಗೆ ಗಾಯ

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ವಿದ್ಯುತ್ ಕಂಬ ಬದಲಿಸುವಾಗ ಸಂಭವಿಸಿದ ಅವಘಡದಲ್ಲಿ ಕೇರೆಗೋಡು ಗ್ರಾಮದ ರವಿ (45) ಸ್ಥಳದಲ್ಲೇ ಸಾವಿಗೀಡಾಗಿದ್ದು, ಮತ್ತೊಬ್ಬ ಕಾರ್ಮಿಕ ಲೋಕೇಶ್ ಗಾಯಗೊಂಡಿದ್ದಾರೆ. ಘಟನೆ ಸ್ಥಳದಲ್ಲಿ ಪೊಲೀಸರ ಪರಿಶೀಲನೆ ನಡೆಯುತ್ತಿದೆ.