ಕೆ.ಆರ್.ಪೇಟೆ: ಸರ್ಕಾರ ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯ ಅಧ್ಯಕ್ಷರಾದ ಎಚ್.ಎಂ ರೇವಣ್ಣ ಅವರು ಖಾಸಗಿ ಕಾರ್ಯಕ್ರಮ ನಿಮಿತ ತಾಲ್ಲೂಕಿಗೆ ಕುಟುಂಬ ಸಮೇತ ಆಗಮಿಸಿದ ಹಿನ್ನೆಲೆ. ಕೆ.ಆರ್. ಪೇಟೆ ಪಟ್ಟಣದಲ್ಲಿರುವ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಆರ್.ಟಿ.ಓ ಮಲ್ಲಿಕಾರ್ಜುನ್ ಅಭಿಮಾನಿಗಳು ಸನ್ಮಾನಿಸಿ ಗೌರವಿಸುವ ಮೂಲಕ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಬಿ ಎಲ್ ದೇವರಾಜು, ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್,ಗ್ಯಾರಂಟಿ ಯೋಜನೆಯ ತಾಲ್ಲೂಕು ಸಮಿತಿ ಅಧ್ಯಕ್ಷ ಎ.ಬಿ ಕುಮಾರ್,ತಾ.ಪಂ ಮಾಜಿ ಸದಸ್ಯ ಸಣ್ಣನಿಂಗೇಗೌಡ, ತಾಲ್ಲೂಕು ಕುರುಬ ಸಂಘದ ಅಧ್ಯಕ್ಷ ಪುರುಷೋತ್ತಮ್, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ಸಿಮೆಂಟ್ ಮಂಜು,ಪುರಸಭೆ ಮಾಜಿ ಅಧ್ಯಕ್ಷೆ ಶಕುಂತಲಾ ರವಿಕುಮಾರ್,ಮಹಾರಾಷ್ಟ್ರ ಕುರುಬ ಸಂಘದ ಯೋಗೇಶ್,ಹಿರಿಯ ಮುಖಂಡರಾದ ಶಿವಪ್ಪ, ವೆಂಕಟಪ್ಪ,ಜಿ ರಾಯಪ್ಪ,ಶ್ರೀನಿವಾಸ್,ಗ್ರಾ.ಪಂ ಮಾಜಿ ಉಪಾಧ್ಯಕ್ಷ ಎ.ರಾಜು,ತಾಲ್ಲೂಕು ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರಾದ ರೂಪ, ಲತಾ, ಶಿವಮ್ಮ, ಉಮೇಶ್, ಸಿ ಆರ್ ಕುಮಾರ್, ಮಡುವಿನಕೋಡಿ ಉಮೇಶ್,ಯುವ ಮುಖಂಡರಾದ ಸಾಯಿ ಸುಮಿತ್,ಅತಿಕ್,ಕಟ್ಟಹಳ್ಳಿ ಸುರೇಶ,ಪ್ರದೀಪ್,ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಮುಖಂಡರು ಇದ್ದರು.
- ಮನು ಮಾಕವಳ್ಳಿ ಕೆ ಆರ್ ಪೇಟೆ
