ಕೊರಟಗೆರೆ : ವೋಟ್ ಚೋರಿ ಮೂಲಕ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಪಕ್ಷ ಅಧಿಕಾರ ದುರುಪಯೋಗಮಾಡಿಕೊಂಡು ಪ್ರಜಾಪ್ರಭುತ್ವವಕ್ಕೆ ದ್ರೂಹ ಮಾಡಲಾಗಿದೆ ಎಂದು ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೊಡ್ಲಹಳ್ಳಿ ಅಶ್ವತ್ಥನಾರಾಯಣ ತಿಳಿಸಿದರು.
ಅವರು ಕೊರಟಗೆರೆ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷವತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರಿ ವಿರುದ್ದದ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿ ನಮ್ಮ ಪಕ್ಷದ ವರೀಷ್ಠರು ಹಾಗೂ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ವೋಟ್ ಚೋರಿ ಬಗ್ಗೆ ಸಾಕ್ಷಿ ಸಮೇತ ಬಹಿರಂಗಗೊಳಿಸುವುದರೊಂದಿಗೆ ಅವರು ನೀಡಿರುವ ದಾಖಲೆಗಳಿಗೆ ಇದುವರೆಗೂ ಚುನಾವಣಾ ಆಯೋಗ ಗಂಭೀರವಾದ ಮತ್ತು ಸಮರ್ಪಕವಾದ ಉತ್ತರ ನೀಡಿಲ್ಲ ಎಂದು ಆರೋಪಿಸಿದ ಅವರು ಚುನಾವಣಾ ಆಯೋಗ ಮತ್ತು ಬಿಜೆಪಿ ಪಕ್ಷದ ಈ ಮತಗಳ್ಳತನದ ವಿರುದ್ದ ನಮ್ಮ ಹೋರಾಟ ನಿಲ್ಲುವುದಿಲ್ಲಾ ಸಹಿ ಸಂಗ್ರಹ ಅಭಿಯಾನ ಮುಂದುರಿಯಲಿದ್ದು ಮನೆ ಮನೆಗಳಿಗೆ ಹೋಗಿ ಬಿಜೆಪಿ ಅಧಿಕಾರ ದುರುಪಯೋಗದ ಬಗ್ಗೆ ಸತ್ಯದ ಅರಿವು ಮೂಡಿಸುದಾಗಿ ತಿಳಿಸಿದರು.
ಮುಖಂಡ ಮಹಲಿಂಗಪ್ಪ ಮಾತನಾಡಿ ಕಳೆದ ಲೋಕಸಭಾ ಚುನಾವಣೆ ವೇಳೆ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಮತಗಳ್ಳತನ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ ಪ್ರಜಾಪ್ರಭುತ್ವಕ್ಕೆ ಮಾರಕ, ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಬಿಜೆಪಿ ಪಕ್ಷಕ್ಕೆ ಕರ್ನಾಟಕದಲ್ಲಿ ಎಂದೂ ಜನಾದೇಶ ದೊರೆತಿಲ್ಲ, ಹೀಗಾಗಿ ವೋಟ್ ಕಳ್ಳತನವನ್ನೇ ಅಸರೆಯಾಗಿಟ್ಟುಕೊಂಡು ಅಧಿಕಾರಕ್ಕೆ ಬಂದಿದ್ದು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದ ಅವರು ಕಾಂಗ್ರೆಸ್ ಪಕ್ಷ ಯಾವಾಗಲೂ ಜನಾದೇಶವನ್ನು ಗೌರವಿಸಿದೆ ಎಂದು ತಿಳಿಸಿದರು.
ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಮಾತನಾಡಿ ಜಾತಿ, ಧರ್ಮದ ಆಧಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುವುದಿಲ್ಲ ಕಾಂಗ್ರೆಸ್ ಪಕ್ಷ ಹಿಂದುಳಿದವರನ್ನು ಮುನ್ನಲೆಗೆ ತರುವ ಬದ್ದತೆಯ ರಾಜಕಾರಣಮಾಡುವ ಪಕ್ಷ, ಕರ್ನಾಟಕದಲ್ಲಿ ಜಾರಿಯಾಗಿರುವ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಯಾವುದೇ ಜಾತಿ, ಧರ್ಮದ ಆಧಾರದಲ್ಲಿ ಅಲ್ಲ ಎಲ್ಲಾ ಸಮುದಾಯಗಳ ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಸೌಲಬ್ಯಗಳನ್ನು ನೀಡಲಾಗುತ್ತಿದೆ ಎಂದ ಅವರು ಬಿಜೆಪಿ ಪಕ್ಷದ ವೋಟ್ ಚೋರಿ ಬಗ್ಗೆ ರಾಜ್ಯದ ಸಾರ್ವಜನಿಕರಿಗೆ ತಿಳಿಸಲಾಗಿವುದು ಎಂದು ತಿಳಿಸಿದರು.
ಸಹಿ ಸಂಗ್ರಹ ಅಬಿಯಾನದಲ್ಲಿ ಪ.ಪಂ.ಸದಸ್ಯ ಕೆ.ಆರ್.ಓಬಳರಾಜು, ಮಾಜಿ ಉಪಾಧ್ಯಕ್ಷ ಕೆ.ವಿ.ಮಂಜುನಾಥ್, ,ಎಲ್.ರಾಜಣ್ಣ, ವಿನಯ್ಕುಮಾರ್, ಹೆಚ್.ಎಂ.ರುದ್ರಪ್ರಸಾದ್, ಮಕ್ತಿಯಾರ್, ಗಣೇಶ್, ಅರವಿಂದ್, ಕೆ.ಬಿ.ಲೋಕೇಶ್, ಹೊಳವನಹಳ್ಳಿ ಕುಂಬಿನರಸಿಂಹಯ್ಯ(ಅಪ್ಪಿ), ತುಂಗಮಂಜುನಾಥ್, ಭೈರೇಶ್, ಜಯರಾಮ್, ನಾಗರಾಜು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜಮ್ಮ, ಲಕ್ಷ್ಮಿದೇವಮ್ಮ, ಸೇರಿದಂತೆ ಇನ್ನಿತರರು ಹಾಜರಿದ್ದರು.
