ನವದೆಹಲಿ: ಸುನೀತಾ ವಿಲಿಯಮ್ಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದು. ಭಾರತ ಭೇಟಿಗೆ ಸುನೀತಾಗೆ ಆಹ್ವಾನ ನೀಡಿದ್ದಾರೆ.
ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, “ಸ್ವಾಗತ, ಕ್ರೂ9! ಭೂಮಿ ನಿಮ್ಮನ್ನು ಮಿಸ್ ಮಾಡಿಕೊಂಡಿತ್ತು. ಸುನೀತಾ ವಿಲಿಯಮ್ಸ್ ಮತ್ತು Crew9 ಗಗನಯಾತ್ರಿಗಳು ಮತ್ತೊಮ್ಮೆ ಪರಿಶ್ರಮ ಎಂದರೆ ಏನು ಎಂದು ನಮಗೆ ತೋರಿಸಿದ್ದಾರೆ. ಅಗಾಧವಾದ ಅಪರಿಚಿತತೆಯ ಮುಂದೆ ಅವರ ಅಚಲ ದೃಢಸಂಕಲ್ಪವು ಲಕ್ಷಾಂತರ ಜನರಿಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ” ಎಂದು ಮೋದಿ ಹೇಳಿದ್ದಾರೆ.
ಮಾರ್ಗದರ್ಶಕ ಮತ್ತು ಐಕಾನ್ ಆಗಿರುವ ಸುನೀತಾ ವಿಲಿಯಮ್ಸ್ ತಮ್ಮ ವೃತ್ತಿಜೀವನದುದ್ದಕ್ಕೂ ಈ ಮನೋಭಾವವನ್ನು ಪ್ರದರ್ಶಿಸಿದ್ದಾರೆ. ಅವರ ಸುರಕ್ಷಿತ ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ದಣಿವರಿಯಿಲ್ಲದೆ ಕೆಲಸ ಮಾಡಿದ ಎಲ್ಲರ ಬಗ್ಗೆ ನಮಗೆ ಬಹಳ ಹೆಮ್ಮೆಯಿದೆ ಎಂದು ಶ್ಲಾಘಿಸಿದ್ದಾರೆ.

ಸುನೀತಾ ವಿಲಿಯಮ್ಸ್ ಭಾರತಕ್ಕೆ ಮರಳುವ ಮೊದಲು ಕೂಡ ಪತ್ರ ಬರೆದಿದ್ದ ಪ್ರಧಾನಿ ಮೋದಿ, ಸುನೀತಾ ವಿಲಿಯಮ್ಸ್ ಅವರ ಸುರಕ್ಷಿತ ವಾಪಸಾತಿಗಾಗಿ ಇಡೀ ವಿಶ್ವವೇ ಉಸಿರು ಬಿಗಿಹಿಡಿದು ಕಾಯುತ್ತಿದೆ. ನೀವು ಸಾವಿರಾರು ಮೈಲುಗಳಷ್ಟು ದೂರದಲ್ಲಿದ್ದರೂ, ನೀವು ನಮ್ಮ ಹೃದಯಕ್ಕೆ ಹತ್ತಿರವಾಗಿದ್ದೀರಿ. ನೀವು ಭಾರತಕ್ಕೆ ಭೇಟಿ ನೀಡುವ ದಿನಕ್ಕಾಗಿ ಕಾಯುತ್ತಿದ್ದೇವೆ ಎಂದಿದ್ದರು. ಕೆಲವು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾಸ್ಸಿಮಿನೊ ಅವರನ್ನು ಭೇಟಿ ಮಾಡಿದ್ದ ಪ್ರಧಾನಿ ಮೋದಿ ಈ ಪತ್ರ ಸುನೀತಾ ವಿಲಿಯಮ್ಸ್ ಅವರನ್ನು ತಲುಪಬೇಕು ಎಂದು ಮನವಿ ಮಾಡಿದ್ದರು.

