ಗಣರಾಜ್ಯೋತ್ಸವ ಪರೇಡ್: ಉತ್ತರ ಪ್ರದೇಶ ಸ್ತಬ್ಧಚಿತ್ರಕ್ಕೆ ಮೊದಲ ಬಹುಮಾನ
ನವದೆಹಲಿ:- ಮಹಾಕುಂಭ ಮೇಳ ಕುರಿತ ಸ್ತಬ್ಧಚಿತ್ರವನ್ನು ಸಿದ್ಧಪಡಿಸಿ 76ನೇ ಗಣರಾಜ್ಯೋತ್ಸವ ಪರೇಡ್ನಲ್ಲಿ ಪ್ರದರ್ಶಿಸಿದ ಉತ್ತರ ಪ್ರದೇಶಕ್ಕೆ ಪ್ರಥಮ ಬಹುಮಾನ ಸಂದಿದೆ.
ಮೂರು ರಕ್ಷಣಾ ದಳಗಳಲ್ಲಿ ಜಮ್ಮು ಮತ್ತು ಕಾಶ್ಮೀರ ರೈಫಲ್ಸ್ ಅತ್ಯುತ್ತಮ ಪಥಸಂಚಲನ ನಡೆಸಿದ ತಂಡ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
ಆತ್ಮನಿರ್ಭರ ಭಾರತದ ಅಡಿಯಲ್ಲಿ ಪರಿಸರ ಸ್ನೇಹಿ ವಸ್ತುಗಳನ್ನು ಸಿದ್ಧಪಡಿಸಿ ಬಳಕೆ ಮಾಡುವ ಮೂಲಕ ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆಯ ಉದ್ದೇಶದ ತ್ರಿಪುರಾ ಸ್ತಬ್ಧಚಿತ್ರಕ್ಕೆ 2ನೇ ಬಹುಮಾನ ಲಭಿಸಿದೆ.
ಆಂಧ್ರಪ್ರದೇಶ ಸರ್ಕಾರವು ಪರಿಸರ ಸ್ನೇಹಿ ಮರದ ಆಟಿಕೆಗಳ ಸ್ತಬ್ಧಚಿತ್ರವನ್ನು ಪ್ರದರ್ಶಿಸಿತ್ತು. ಇದು ಮೂರನೇ ಬಹುಮಾನಕ್ಕೆ ಭಾಜನವಾಗಿದೆ
ಕೇಂದ್ರ ಸಚಿವಾಲಯ ಹಾಗೂ ಇಲಾಖೆಗಳ ವಿಭಾಗದಲ್ಲಿ ಆದಿವಾಸಿ ಕಲ್ಯಾಣ ಸಚಿವಾಲಯದ ಸ್ತಬ್ಧಚಿತ್ರ ಪ್ರಥಮ ಬಹುಮಾನ ಪಡೆದಿದೆ.
ಸಾರ್ವಜನಿಕರ ಮೆಚ್ಚಿನ ಸ್ತಬ್ಧಚಿತ್ರ ವಿಭಾಗದಲ್ಲಿ ಗುಜರಾತ್ ಮೊದಲ ಬಹುಮಾನ ಪಡೆದಿದೆ. 2ನೇ ಹಾಗೂ ಮೂರನೇ ಬಹುಮಾನವು ಕ್ರಮವಾಗಿ ಉತ್ತರ ಪ್ರದೇಶ ಹಾಗೂ ಉತ್ತರಾಖಂಡಕ್ಕೆ ಲಭಿಸಿದೆ.
ಸಿಆರ್ಪಿಎಫ್ಗೆ ಅತ್ಯುತ್ತಮ ಪಥ ಸಂಚಲನ ತಂಡ ಹಾಗೂ ಸಚಿವಾಲಯದ ಸ್ತಬ್ಧಚಿತ್ರಗಳಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಬಹುಮಾನ ಪಡೆದಿವೆ.
