ಟಿ.ನರಸೀಪುರ : “ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರತಿಯಾಗಿ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ಆಚರಿಸುತ್ತೇವೆ-ಮಣಿಕಂಠರಾಜ್ ಗೌಡ

ಟಿ.ನರಸೀಪುರ: ನಾಡಪ್ರಭು ಕೆಂಪೇಗೌಡರ ಜಯಂತಿಗೆ ಸಂಬಂಧಿಸಿದ ಪೂರ್ವಭಾವಿ ಸಭೆಗೆ ತಿಳಿವಳಿಕೆ ನೀಡದೇ ನಡೆಸಿದ್ದ ತಾಲ್ಲೂಕು ಆಡಳಿತದ ಕ್ರಮಕ್ಕೆ ಮಣಿಕಂಠರಾಜ್ ಗೌಡ ತೀವ್ರ ವಿರೋಧ ವ್ಯಕ್ತಪಡಿಸಿದರು. ಸಭೆಯಿಂದ ಹೊರನಡೆದು ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಕೆಂಪೇಗೌಡರ ಜಯಂತಿಯನ್ನು ಸರಳವಾಗಿ ಆಚರಿಸಿ ಕೈ ತೊಳೆದುಕೊಳ್ಳುವ ಕಾಲ ಮುಗಿದಿದೆ. ಮುಂಬರುವ ದಿನಗಳಲ್ಲಿ ಡಿ.ಕೆ. ಶಿವಕುಮಾರ್, ಹೆಚ್.ಡಿ. ಕುಮಾರಸ್ವಾಮಿ, ನಿರ್ಮಲಾನಂದ ಸ್ವಾಮೀಜಿ ಸೇರಿದಂತೆ ಗಣ್ಯರನ್ನು ಕರೆಸಿ ಅದ್ದೂರಿಯಾಗಿ ಕಾರ್ಯಕ್ರಮ ನಡೆಸಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.