ಮೊನ್ನೆ ಭಾನುವಾರ ಅರಕಲಗೂಡಿನಲ್ಲಿ ಶ್ರೀ ವೇಣುಗೋಪಾಲ ಕೃಪಾಪೋಷಿತ ನಾಟಕ ಮಂಡಳಿ ಕಲಾವಿದರು ಹಾರ್ಮೋನಿಯಂ ಮಾಸ್ಟರ್ ಜಿ.ಜಿ. ಕೇಶವ ಗರಿಘಟ್ಟ ಇವರ ನಿರ್ದೇಶನದಲ್ಲಿ ಕುರುಕ್ಷೇತ್ರ ನಾಟಕ ಪ್ರದರ್ಶಿಸಿದರು. ನಾಟಕ ವೀಕ್ಷಿಸಲು ಹೋಗಿದ್ದ ನನಗೆ ಸೂತ್ರಧಾರಿ ಪಾತ್ರಧಾರಿ ಹಾಡಿದ ರಂಗಗೀತೆ ಅದೇ ಪ್ರಥಮ ಬಾರಿ ಕೇಳಿ ಬಹಳ ಇಷ್ಟವಾಯಿತು. ಪ್ರೇಕ್ಷಕರು ಕೂಡ ಸೂತ್ರದಾರಿ ಹಾಡಿ ಚಪ್ಪಾಳೆ ಬಾರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಗೀತೆಯಲ್ಲಿ ಏನೆಲ್ಲಾ ಕನ್ನಡ ಕಲಾ ಸಾರಸ್ವತ ಲೋಕವನ್ನು ತೆರೆದಿಟ್ಟಿದ್ದಾರೆ ಕವಿ ಎಂದರೆ..
ಕನ್ನಡ ನಾಡಿನ ಕಲೆ ಮಕ್ಕಳೇ ಅಳಿಯದೆ ಉಳಿಯಲಿ ನಮ್ಮೀ ಕಲೆ ಎಲ್ಲಿಲ್ಲೂ ಬೆಳಗಲಿ ನಮ್ಮೀ ಕಲೆ ಪಂಪ ರನ್ನ ಜನ್ಮ ಪೊನ್ನ ರಾಮಾನುಜ ತೀರ್ಥಂಕರ ಬೇಲೂರು ಹಳೇಬೀಡು ಕಲೆಗಳ ತವರೂರು
ಸುಬ್ಬಯ್ಯ ನಾಯ್ಡುವಿನ ನಟನಾ ಕಲೆ ನಾಟಕ ರತ್ನ ಗುಬ್ಬಿ ವೀರಣ್ಣ ನಟಸಾರ್ವಭೌಮ ರಾಜಕುಮಾರ ಅಭಿನವ ಭಾರ್ಗವ ಶಿರೋಮಣಿ ಮಲ್ಲಪ್ಪ ನಟನಾ ಕಲೆ..
ಶ್ರೀ ಕೇಶವರವರು ಸಾಕ್ಷರತಾ ಆಂದೋಲನದಲ್ಲಿ ಕೆಲಸ ಮಾಡಿದ ವಿಚಾರ ಕೂಡ ಶಿಕ್ಷಕರು ಪಿ. ನಂದಕುಮಾರರಿಂದ ತಿಳಿಯಿತು. 1997ರ ಕಾಲಘಟ್ಟದಲ್ಲಿ ನಾನು (ಗೊರೂರು ಅನಂತರಾಜು) ಸಾಕ್ಷರತಾ ಆಂದೋಲನದಲ್ಲಿ ತೊಡಗಿಸಿಕೊಂಡು ಅಕ್ಷರ ಅಭಿಷೇಕ ನವ ಸಾಕ್ಷರರ ಪಠ್ಯ ಪುಸ್ತಕ ರಚನಾ ಸಮಿತಿಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೆ. ಈ ಒಂದು ಆಸಕ್ತಿಯಲ್ಲಿ ಕೇಶವರವರಿಗೆ ತಮ್ಮ ಒಂದು ಕಲಾ ಪರಿಚಯವನ್ನು ಬರೆಯಲು ಬಯಸಿ ಸಂಪರ್ಕಿಸಿದೆ. ಅವರು ಹೇಳಿದರು. ಅನಂತರಾಜ್ ಸಾರ್, ನಾನು ನಿಮ್ಮನ್ನು ಬಲ್ಲೆನು. ಆದರೆ ನನ್ನ ಪರಿಚಯ ನಿಮಗಿಲ್ಲ ಅಷ್ಟೇ.
ನಾನು
ಕೇಶವ ಜಿ. ಜಿ. ಹುಟ್ಟಿದ ಊರು ಗರೀಘಟ್ಟ.ಇದು ಅರಕಲಗೋಡು ತಾಲೂಕಿಗೆ ಸೇರಿದೆ. ಹಾಸನ ಜಿಲ್ಲೆಯಲ್ಲಿ ಬರುತ್ತದೆ. ನನ್ನ ಜನ್ಮ ದಿನಾಂಕ 04.06.1979. ನಾನು ಪ್ರಾಥಮಿಕ ಶಿಕ್ಷಣವನ್ನು
ಗರೀಘಟ್ಟದಲ್ಲಿ ಹಾಗೂ ಹೊನ್ನವಳ್ಳಿಯ ಹೇಮಾವತಿ ಪ್ರೌಢಶಾಲೆಯಲ್ಲಿ ಹೈಸ್ಕೂಲು ವ್ಯಾಸಂಗ ಪಿ.ಯು.ಸಿ ಮತ್ತು ಬಿ.ಎ. ಪದವಿ ಸರ್ಕಾರಿ ಕಲಾ ಕಾಲೇಜು ಹಾಸನ ಇಲ್ಲಿ ಮಾಡಿದೆ. ವಿದ್ಯಾಭ್ಯಾಸದ ಜೊತೆಯಲ್ಲಿಯೇ ಸಮಾಜ ಸೇವೆಯಲ್ಲಿ ಪಾಲ್ಗೊಳ್ಳುವಿಕೆ, ರಾಜ್ಯ ಸರ್ಕಾರದ ಸಾಕ್ಷರತಾ ಆಂದೋಲನದಲ್ಲಿ ಸ್ವಯಂಸೇವಕನಾಗಿ ಸೇವೆ. 2005-06ನೇ ಸಾಲಿನಲ್ಲಿ ಪ್ರಾರಂಭವಾದ ಸಾಕ್ಷರತಾ ಮುಂದುವರಿಕೆ ಶಿಕ್ಷಣ ಕಾರ್ಯಕ್ರಮದಲ್ಲಿ ಕ್ರಮವಾಗಿ ಪ್ರೇರಕ ಹಾಗೂ ನೋಡಲ್ ಪ್ರೇರಕ, ಜಿಲ್ಲಾ ಸಂಪನ್ಮೂಲ ವ್ಯಕ್ತಿಯಾಗಿ ಸಾಕ್ಷರತಾ ಕಲಾವಿದನಾಗಿ ಸೇವೆ, ಅರಿವು ಕಾರ್ಯಕ್ರಮದಲ್ಲಿ ಬೀದಿ ನಾಟಕ ಹಾಗೂ ಕಲಾಜಾಥಾ ಕಾರ್ಯಕ್ರಮದ ನಿರ್ದೇಶಕನಾಗಿ ಸೇವೆ ಸಲ್ಲಿಕೆ, ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸ್ತ್ರೀಶಕ್ತಿ ಗುಂಪುಗಳ ಸದಸ್ಯರಿಗೆ ತರಬೇತಿ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಕೆ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ವಿವಿದ ಕಾರ್ಯಕ್ರಮದಲ್ಲಿ ನಿರೂಪಕನಾಗಿ 2014ರಲ್ಲಿ ರಂಗಭೂಮಿ ಕ್ಷೇತ್ರಕ್ಕೆ ಪ್ರವೇಶ ಮಾಡಿದೆ.
ಅರಕಲಗೂಡು ಪಟ್ಟಣದಲ್ಲಿ ತಾಲ್ಲೂಕಿನ ವಿವಿಧ ವಿಕಲಚೇತನರನ್ನೊಳಗೊಂಡ ವಿಕಲಚೇತನರ ಸಂಘವನ್ನು ರಚಿಸಿ ವಿಕಲಚೇತನರಿಂದಲೇ ದಾನಶೂರಕರ್ಣ ನಾಟಕ ಪ್ರದರ್ಶನದಲ್ಲಿ ಕರ್ಣನ ಪಾತ್ರದ ಮೂಲಕ ರಂಗಭೂಮಿಗೆ ಪ್ರವೇಶ ಮಾಡಿದೆ. ಶ್ರೀಕೃಷ್ಣ, ಅರ್ಜುನ, ಧರ್ಮರಾಯ, ಸತ್ಯವ್ರತ, ಬೀಷ್ಮ, ದ್ರೋಣ, ದೃತಾರಾಷ್ಟ್ರ, ನಾರದ, ವಿಧುರ, ಭರತ, ವಿಭಿಷಣ, ವಸಿಷ್ಠ ಮುಂತಾದ ಪಾತ್ರಗಳಲ್ಲಿ ಅಭಿನಯಿಸಿದೆ. ಗುರುಗಳ ಕೈ ನೋಡಿಕೊಂಡು ಹಾರ್ಮೋನಿಯಂ ಕಲಿಕೆ ಪ್ರಾರಂಭಿಸಿದೆ. ಯಾವ ಗುರುಗಳ ಬಳಿಯೂ ಅಭ್ಯಾಸ ಮಾಡದೆ ತರಬೇತಿಯೂ ಇಲ್ಲದೇ ಸ್ವತಃ ಹಾರ್ಮೋನಿಯಂ ನುಡಿಸುವುದನ್ನು ಅಭ್ಯಾಸ ಮಾಡಿಕೊಂಡು ಮೊದಲಬಾರಿಗೆ 2023ರಲ್ಲಿ ರಾಜ ವಿಕ್ರಮ ನಾಟಕದ ನಿರ್ದೇಶನ ಮಾಡಿ ಆ ದಿನದಿಂದ ಈವರೆಗೆ ರಾಜಾವಿಕ್ರಮ, ರಾಜ ಸತ್ಯವ್ರತ, ದಾನಶೂರಕರ್ಣ, ಕುರುಕ್ಷೇತ್ರ ಹೀಗೆ 12 ನಾಟಕಗಳ ನಿರ್ದೇಶನ ಮಾಡಿರುವೆ.
ಹರಿಕಥೆ ಕಲಾವಿದನಾಗಿಯೂ ಸೇವೆ ಸಲ್ಲಿಸುತ್ತಿರುವೆ ನನ್ನ ಈ ಸೇವೆ ಗಮನಿಸಿ ಕೆಲವು ಸಂಘ ಸಂಸ್ಥೆಗಳು ರಂಗರತ್ನ, ಹೊಯ್ಸಳರತ್ನ, ಕಲಾಬೀಷ್ಮ, ರಂಗ ಕುಸುಮ, ರಂಗರತ್ನಾಕರ ಹೀಗೆ ಪ್ರಶಸ್ತಿ ನೀಡಿ ಗೌರವಿಸಿರುತ್ತಾರೆ. ಇದುವರೆಗೂ ಸರಿಸುಮಾರು 400ಕ್ಕೂ ಹೆಚ್ಚು ಸ್ವ – ಸಹಾಯ ಸಂಘಗಳನ್ನು ರಚನೆ ಮಾಡಿ ಮಾಹಿತಿ ನೀಡಿ ಮಾರ್ಗದರ್ಶನ ಮಾಡಿರುತ್ತೇನೆ, ಗ್ರಾಮೀಣ ಭಾಗದ ವಿಕಲಚೇತನರಿಗೆ ಗ್ರಾಮ ಮಟ್ಟದಲ್ಲಿ ಸರ್ಕಾರಿ ಸವಲತ್ತುಗಳ ಮಾಹಿತಿ ನೀಡುವ ಸಂಬಂಧ ಗ್ರಾಮ ಪಂಚಾಯಿತಿ ಮಟ್ಟದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿರುವೆ.
ಕಲೆ ಮತ್ತು ಸಂಸ್ಕೃತಿಯನ್ನು ಉಳಿಸುವ ಸಲುವಾಗಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಕಲಾ ಮತ್ತು ಸಾಂಸ್ಕೃತಿಕ ಸಂಘ ಸ್ಥಾಪಿಸಿ ಅ ಮೂಲಕ ರಂಗ ಕಲೆಯನ್ನು ಉಳಿಸುವ ಪೋಷಿಸುವ ಸಲುವಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ಸಂಘಟಿಸಿರುವೆ. ಹಾಗೂ ಸಾರ್ವಜನಿಕರಿಗೂ
ಇವರ ಸಂಪರ್ಕ ವಿಳಾಸ:
ಕೇಶವ ಜಿ. ಜಿ.
ರಂಗನಿರ್ದೇಶಕರು
ಗರೀಘಟ್ಟ, ಕಸಬಾ ಹೋಬಳಿ, ಅರಕಗೂಡು ತಾ. ಹಾಸನ ಜಿಲ್ಲೆ. ಮೊ ಸಂಖ್ಯೆ 9880183485
—

ಗೊರೂರು ಅನಂತರಾಜು,
ಹಾಸನ
ಹುಣಸಿನಕೆರೆ ಬಡಾವಣೆ,
29 ನೇ ವಾರ್ಡ್
3ನೇ ಕ್ರಾಸ್
ಹಾಸನ 57320.
