ವಿಜಯಪುರ: ವಿಜಯಪುರ ನಗರದ ಹೊರ ವಲಯದಲ್ಲಿರುವ ಭೂತನಾಳ ಕೆರೆಯಲ್ಲಿ ಹೆಣಗಳ ರಾಶಿ ತೇಲಿ ಬಂದಿದ್ದು, ಸ್ಥಳೀಯರಲ್ಲಿ ಆತಂ ಮೂಡಿಸಿದೆ. ಭೂತನಾಳ ಕೆರೆಯಲ್ಲಿ ಒಟ್ಟು 6 ಶವ ಪತ್ತೆಯಾಗಿದ್ದು, ಇದರಲ್ಲಿ ತಾಯಿ ಸೇರಿ ಮಕ್ಕಳು ಶವಗಳು ಕಂಡು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಭೂತನಾಳ ಕೆರೆಯಲ್ಲಿ ತೇಲಿದ ಆರು ಶವಗಳ ರಹಸ್ಯ!
ಇಬ್ಬರು ಗಂಡು ಮಕ್ಕಳು, ಮೂವರು ಬಾಲಕಿಯರು ಸೇರಿದಂತೆ ಓರ್ವ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಮೊದಲು ಕೆರೆ ನೋಡಲು ಬಂದ ಪ್ರವಾಸಿಗರು ಇರಬಹುದು ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ನೀರಿನಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡುವ ಕೆಲಸ ಮಾಡಿದ್ದಾರೆ.
ಆತ್ಮಹತ್ಯೆಗೆ ಶರಣಾಗಿರುವ ನಿರೀಕ್ಷೆ!
ಸ್ಥಳಕ್ಕೆ ಭೇಟಿ ನೀಡಿರುವ ಆದರ್ಶ ನಗರ ಪೊಲೀಸರು ತನಿಖೆ ಆರಂಭಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಮೃತರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದ್ದು, ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ. ಮೃತ ಆರು ಮಂದಿಯಲ್ಲಿ ತಾಯಿ ಸೇರಿದಂತೆ ಐವರು ಮಕ್ಕಳು ಎಂದು ಪೊಲೀಸರು ಗುರುತಿಸಿದ್ದಾರೆ.
